masthmagaa.com:
ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವಂತೆ ಕೆಲ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಾಗಲೇ, ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿ (AIKCC) ಜೊತೆ ಗುರುತಿಸಿಕೊಂಡಿರುವ 10 ಸಂಘಟನೆಗಳು ಇದೇ 3 ಕೃಷಿ ಕಾಯ್ದೆಗಳಿಗೆ ಬೆಂಬಲ ಸೂಚಿಸಿವೆ. ಈ ಸಂಬಂಧ ಇವತ್ತು ಉತ್ತರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ, ಬಿಹಾರ ಮತ್ತು ಹರಿಯಾಣ ಮೂಲದ ಸಂಘಟನೆಗಳು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನ ಭೇಟಿಯಾಗಿ ಇದಕ್ಕೆ ಸಂಬಂಧಿಸಿದ ಜ್ಞಾಪಕ ಪತ್ರವನ್ನ ನೀಡಿದ್ರು. ಕೆಲ ಸಂಘಟನೆಗಳು ನೂತನ ಕಾಯ್ದೆಗಳ ವಿರುದ್ಧವಾಗಿದ್ರೆ, ಇನ್ನೂ ಕೆಲ ಸಂಘಟನೆಗಳು ಕಾಯ್ದೆಗಳ ಪರವಾಗಿದೆ ಅನ್ನೋದು ಸ್ಪಷ್ಟವಾಗಿದೆ.
ಇದರ ಬೆನ್ನಲ್ಲೇ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ‘ರೈತ ಮುಖಂಡರ ಜೊತೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ. ನಾವು ನೀಡಿದ ಪ್ರಸ್ತಾವನೆಗೆ ಸಂಬಂಧಿಸಿದಂತೆ ರೈತ ಸಂಘಟನೆಗಳು ತಮ್ಮ ಅಭಿಪ್ರಾಯವನ್ನ ತಿಳಿಸಬೇಕು. ಅವರಿಂದ ಪ್ರಸ್ತಾವನೆ ಬಂದ್ರೆ ಖಂಡಿತವಾಗಿಯೂ ಅದರ ಬಗ್ಗೆ ಚರ್ಚೆ ನಡೆಸುತ್ತೇವೆ’ ಅಂತ ಹೇಳಿದ್ದಾರೆ.
-masthmagaa.com
Contact Us for Advertisement