masthmagaa.com:
ಮಹಾರಾಷ್ಟ್ರದ ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 25 ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಇದುವರೆಗೆ ಒಟ್ಟು 31 ಜನರನ್ನು ರಕ್ಷಿಸಲಾಗಿದೆ.
ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದುಬಿದ್ದಿದೆ. ಸದ್ಯ ಎನ್ಡಿಆರ್ಎಫ್ ತಂಡದಿಂದ ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.
ಕಟ್ಟಡ ಕುಸಿತಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಗೃಹ ಸಚಿವ ಅಮಿತ್ ಶಾ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
-masthmagaa.com
Contact Us for Advertisement