ರಾಜ್ಯದಲ್ಲಿ ಸ್ವಲ್ಪ ತಣ್ಣಗಾದ ಕೊರೋನಾ ಮಹಾಮಾರಿ..!

masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10 ಕೊರೋನಾ ಪ್ರಕರಣಗಳು ದೃಢಪಟ್ಟಿವೆ ಅಂತ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 858 ಕ್ಕೆ ಏರಿಕೆಯಾಗಿದ್ದು, 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ  422 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿರೋ ಆ್ಯಕ್ಟಿವ್ ಪ್ರಕರಣಗಳ ಸಂಖ್ಯೆ 405 ಇದೆ.

ಇಂದು ದಾವಣಗೆರೆಯಲ್ಲಿ 3 ಪ್ರಕರಣಗಳು ದೃಢಪಟ್ಟಿವೆ. ಬೀದರ್​ ಹಾಗೂ ಬಾಗಲಕೋಟೆಯಲ್ಲಿ ತಲಾ 2, ಕಲಬುರಗಿ, ವಿಜಯಪುರ ಹಾಗೂ ಹಾವೇರಿಯಲ್ಲಿ ತಲಾ 1 ಪ್ರಕರಣ ದೃಢಪಟ್ಟಿವೆ.

ಶುಕ್ರವಾರ 48 ಪ್ರಕರಣ, ಶನಿವಾರ 41 ಪ್ರಕರಣ ಹಾಗೂ ಭಾನುವಾರ 54 ಪ್ರಕರಣ ದೃಢಪಟ್ಟಿದ್ದ ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇವತ್ತು ಮಧ್ಯಾಹ್ನದವರೆಗೆ ಕೇವಲ 10 ಪ್ರಕರಣ ದೃಢಪಟ್ಟಿದೆ. ಈ ಮೂಲಕ ಕಾಯಿಲೆಯ ಆರ್ಭಟ ಸ್ವಲ್ಪ ಕಡಿಮೆಯಾದಂತೆ ಕಾಣ್ತಿದೆ. ಆದ್ರೆ ಸಂಜೆ ಬಿಡುಗಡೆಯಾಗುವ ಹೆಲ್ತ್​ ಬುಲೆಟಿನ್​ನಲ್ಲಿ ಇನ್ನೇನು ಕಾದಿದೆಯೋ ಗೊತ್ತಿಲ್ಲ.

masthmagaa.com

Contact Us for Advertisement

Leave a Reply