ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಿಟ್ಟ 22 ಮಾಜಿ ಶಾಸಕರು ಬಿಜೆಪಿ ಸೇರ್ಪಡೆ

masthmagaa.com:

ದೆಹಲಿ: ಇತ್ತೀಚೆಗೆ ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಕಾಂಗ್ರೆಸ್​​​ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಧ್ಯಪ್ರದೇಶದ 22 ಮಂದಿ ಶಾಸಕರು ಈಗ ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ. ಈ 22 ಮಂದಿ ಕೈ ಶಾಸಕರು ಮಧ್ಯಪ್ರದೇಶದ ಕಮಲ್​ನಾಥ್ ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರೆಲ್ಲರೂ ದೆಹಲಿಯಲ್ಲಿಂದು ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆಯಲ್ಲಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ ನಡ್ಡ ಅವರನ್ನು ಭೇಟಿಯಾದ್ರು. ಈ ವೇಳೆ ಜೆ.ಪಿ ನಡ್ಡಾ ಎಲ್ಲಾ 22 ಮಂದಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸ್ವಾಗತಿಸಿದ್ರು.

ಬಳಿಕ ಟ್ವೀಟ್ ಮಾಡಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಸಂಕಲ್ಪ ಹೊಂದಿರೋ ನನ್ನದೇ ಕುಟುಂಬದ 22 ಮಂದಿ ನಾಯಕರು ಬಿಜೆಪಿ ಸೇರಿದ್ದಾರೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply