masthmagaa.com:

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇವತ್ತು ಮಧ್ಯಾಹ್ನದವರೆಗೆ ಬರೋಬ್ಬರಿ 45 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು, 1032ಕ್ಕೆ ಏರಿಕೆಯಾಗಿದೆ. ಇದುವರೆಗೆ 35 ಮಂದಿ ಮೃತಪಟ್ಟಿದ್ದು, 476 ಮಂದಿ ಗುಣಮುಖರಾಗಿದ್ದಾರೆ. 520 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವತ್ತು ಹೊಸದಾಗಿ ಪತ್ತೆಯಾದ 45 ಪ್ರಕರಣಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ 16 ಮಂದಿಗೆ ಕಾಯಿಲೆ ತಗುಲಿದೆ. ಇದರಲ್ಲಿ 15 ಜನ ಇತ್ತೀಚೆಗಷ್ಟೇ ದುಬೈನಿಂದ ಬಂದವರಾಗಿದ್ದಾರೆ.

ಉಡುಪಿಯಲ್ಲಿ 5 ಜನರಿಗೆ ಕಾಯಿಲೆ ತಗುಲಿದ್ದು, ಐವರೂ ಕೂಡ ದುಬೈನಿಂದ ಬಂದವರಾಗಿದ್ದಾರೆ.

ಬೆಂಗಳೂರು ನಗರದಲ್ಲಿ 13 ಮಂದಿಗೆ ಹೊಸದಾಗಿ ಸೋಂಕು ಹರಡಿದೆ. ಇದರಲ್ಲಿ 11 ಮಂದಿ ರೋಗಿ ನಂಬರ್ 653ರ (34 ವರ್ಷದ ಪುರುಷ) ದ್ವಿತೀಯ ಸಂಪರ್ಕಕ್ಕೆ ಬಂದವರಾಗಿದ್ದಾರೆ.

ಹಾಸನದಲ್ಲಿ 3 ಜನರಿಗೆ ಸೋಂಕು ತಗುಲಿದ್ದು, ಮೂವರೂ ಕೂಡ ಮುಂಬೈನಿಂದ ಬಂದವರಾಗಿದ್ದಾರೆ.

ಬೀದರ್​ ಜಿಲ್ಲೆಯಲ್ಲಿ 3 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಚಿತ್ರದುರ್ಗದಲ್ಲಿ ಇಬ್ಬರಿಗೆ ಕಾಯಿಲೆ ಪತ್ತೆಯಾಗಿದ್ದು, ಚೆನ್ನೈನಿಂದ ಬಂದವರಾಗಿದ್ದಾರೆ.

ಉಳಿದಂತೆ ಶಿವಮೊಗ್ಗ, ಕೋಲಾರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕಾಯಿಲೆ ದೃಢಪಟ್ಟಿದೆ ಅಂತ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply