ರಾಜ್ಯದಲ್ಲಿ ಕೊರೋನಾ ‘ಮಹಾ’ ಸ್ಫೋಟ.. ಮಂಡ್ಯ, ಹಾಸನ, ಕಲಬುರಗಿ ತತ್ತರ..!

masthmagaa.com:

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇವತ್ತು ಮಧ್ಯಾಹ್ನದವರೆಗೆ ಬರೋಬ್ಬರಿ 54 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ ಅಂತ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,146ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಪತ್ತೆಯಾದ 54 ಪ್ರಕರಣಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ 22 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 18 ಮಂದಿ ಇತ್ತೀಚೆಗಷ್ಟೇ ಮಹಾರಾಷ್ಟ್ರದ ಮುಂಬೈನಿಂದ ಬಂದವರಾಗಿದ್ದಾರೆ. ಇನ್ನುಳಿದ 4 ಮಂದಿ ರೋಗಿ ನಂಬರ್ 869ರ (28 ವರ್ಷದ ಪುರುಷನ) ಸಂಪರ್ಕಕ್ಕೆ ಬಂದವರಾಗಿದ್ದಾರೆ.

ಕಲಬುರಗಿಯಲ್ಲಿ 10 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರಲ್ಲಿ 6 ಮಂದಿ ಮುಂಬೈನಿಂದ ಬಂದವರಾಗಿದ್ದರೆ.

ಹಾಸನದಲ್ಲಿ 6 ಪ್ರಕರಣಗಳು ದೃಢಪಟ್ಟಿದ್ದು, ಆರಕ್ಕೆ ಆರೂ ಜನ ಮುಂಬೈನಿಂದ ಬಂದವರಾಗಿದ್ದಾರೆ.

ಧಾರವಾಡದಲ್ಲಿ ಹೊಸದಾಗಿ 4 ಕೇಸ್​ಗಳು ಪತ್ತೆಯಾಗಿವೆ. ಇದರಲ್ಲಿ ಮೂವರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ಯಾದಗಿರಿಯಲ್ಲಿ 3 ಪ್ರಕರಣ ಪತ್ತೆಯಾಗಿದ್ದು, ಮೂವರೂ ಕೂಡ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ಕೋಲಾರದಲ್ಲಿ 3 ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ ಒಬ್ಬರು ಚೆನ್ನೈನಿಂದ ಬಂದವರಾಗಿದ್ದಾರೆ.

ದಕ್ಷಿಣ ಕನ್ನಡ ಮತ್ತು  ಶಿವಮೊಗ್ಗದಲ್ಲಿ ತಲಾ 2 ಪ್ರಕರಣಗಳು ದೃಢಪಟ್ಟಿವೆ. ದಕ್ಷಿಣ ಕನ್ನಡದ ಒಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಮುಂಬೈ ನಂಟು ಹೊಂದಿದ್ದಾರೆ.

ಉಡುಪಿ ಮತ್ತು ವಿಜಯಪುರದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಉಡುಪಿಯ ಪ್ರಕರಣ ಮುಂಬೈ ನಂಟು ಹೊಂದಿದೆ.

ಉಡುಪಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ 54 ವರ್ಷದ ಪುರುಷನಿಗೆ (ರೋಗಿ ನಂಬರ್ 1093) ಕೊರೋನಾ ಸೋಂಕು ತಗುಲಿತ್ತು ಅನ್ನೋದು ಈಗ ಗೊತ್ತಾಗಿದೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ 497 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 611 ಜನ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

-masthmagaa.com

Contact Us for Advertisement

Leave a Reply