masthmagaa.com:
ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿ ಇಂದಿಗೆ 45 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರೋ ಪ್ರಧಾನಿ ನರೇಂದ್ರ ಮೋದಿ, ‘ಇವತ್ತಿಗೆ ಸರಿಯಾಗಿ 45 ವರ್ಷಗಳ ಹಿಂದೆ ದೇಶದ ಮೇಲೆ ತುರ್ತುಪರಿಸ್ಥಿತಿ ಹೇರಲಾಯ್ತು. ಆ ಸಮಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ನಡೆಸಿದ, ಹಿಂಸೆ ಅನುಭವಿಸಿದ ಎಲ್ಲರಿಗೂ ನನ್ನ ನಮನಗಳು. ಅವರ ತ್ಯಾಗ ಮತ್ತು ಬಲಿದಾನವನ್ನು ದೇಶ ಯಾವತ್ತೂ ಮರೆಯೋದಿಲ್ಲ’ ಅಂತ ಹೇಳಿದ್ದಾರೆ.
आज से ठीक 45 वर्ष पहले देश पर आपातकाल थोपा गया था। उस समय भारत के लोकतंत्र की रक्षा के लिए जिन लोगों ने संघर्ष किया, यातनाएं झेलीं, उन सबको मेरा शत-शत नमन! उनका त्याग और बलिदान देश कभी नहीं भूल पाएगा। pic.twitter.com/jlQVJQVrsX
— Narendra Modi (@narendramodi) June 25, 2020
ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. 1977ರ ಮಾರ್ಚ್ 21ರವರೆಗೆ ಬರೋಬ್ಬರಿ 21 ತಿಂಗಳ ಕಾಲ ತುರ್ತುಪರಿಸ್ಥಿತಿ ಇತ್ತು. ಈ ಅವಧಿಯಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆ, ಪತ್ರಿಕಾ ಸ್ವಾತಂತ್ರ್ಯದಿಂದ ಹಿಡಿದು ಎಲ್ಲವನ್ನೂ ಇಂದಿರಾ ಗಾಂಧಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ರಾಜಕೀಯ ವಿರೋಧಿಗಳನ್ನೆಲ್ಲಾ ಜೈಲಿಗೆ ಕಳಿಸಲಾಯ್ತು.
-masthmagaa.com
Contact Us for Advertisement