masthmagaa.com:
ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರರು ಇವತ್ತು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ವೇಗಿ ಮೊಹಮ್ಮದ್ ಸಿರಾಜ್ ಹೈದ್ರಾಬಾದ್ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗ್ತಿದ್ದಂತೇ ತಮ್ಮ ತಂದೆ ಸಮಾಧಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾಗ ಸಿರಾಜ್ ತಂದೆ ಇಹಲೋಕ ತ್ಯಜಿಸಿದ್ದರು. ಸಿರಾಜ್ಗೆ ಭಾರತಕ್ಕೆ ಬರಲು ಅವಕಾಶ ಕೊಟ್ಟರೂ ಅವರು ಬಂದಿರಲಿಲ್ಲ. ಇವತ್ತು ಏರ್ಪೊರ್ಟ್ನಿಂದ ಸೀದಾ ತಂದೆ ಸಮಾಧಿ ಬಳಿ ಪುಷ್ಪ ನಮನ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಸಿರಾಜ್, ಸರಣಿಯಲ್ಲಿ ಭಾರತದ ಪರ ಅತಿಹೆಚ್ಚು 13 ವಿಕೆಟ್ ಪಡೆದು ಮಿಂಚಿದ್ರು.
-masthmagaa.com
Contact Us for Advertisement