masthmagaa.com:
ಸಿಎಎ ಅಂದ್ರೆ ನಾಗರಿಕತ್ವ ತಿದ್ದುಪಡಿ ಮಸೂದೆಗೆ ಭಾರಿ ವಿರೋಧ ವ್ಯಕ್ತವಾದ ಬಳಿಕ ಈಗ ಕೇಂದ್ರ ಗೃಹ ಇಲಾಖೆ ಅಧಿಸೂಚನೆಯೊಂದನ್ನ ಹೊರಡಿಸಿದೆ. ಈ ಮೂಲಕ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶಗಳ ಅಲ್ಪ ಸಂಖ್ಯಾತ ವಲಸಿಗರು ಭಾರತದ ನಾಗರಿಕತ್ವಕ್ಕಾಗಿ ಅರ್ಜಿ ಸಲ್ಲಿಸಲು ಆಹ್ವಾನಿಸಿದೆ. ಎಲ್ಲಾ ಕಡೆಗಳಲ್ಲಿ ಅಲ್ಲ.. ಗುಜರಾತ್, ರಾಜಸ್ಥಾನ, ಛತ್ತೀಸ್ಗಡ, ಹರಿಯಾಣ ಮತ್ತು ಪಂಜಾಬ್ನ 13 ಜಿಲ್ಲೆಗಳಲ್ಲಿರೋ ಹಿಂದೂ, ಕ್ರೈಸ್ತ, ಸಿಖ್, ಜೈನ ಮತ್ತು ಬೌದ್ಧ ಧರ್ಮದವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದಿಂದ 2014ರ ಡಿಸೆಂಬರ್ 30ಕ್ಕೂ ಮುನ್ನ ಭಾರತಕ್ಕೆ ಬಂದ ಆ ದೇಶಗಳ ಅಲ್ಪ ಸಂಖ್ಯಾತರಿಗೆ ನಾಗರಿಕತ್ವ ನೀಡೋ ಕಾಯ್ದೆ ಇದಾಗಿದೆ.
-masthmagaa.com
Contact Us for Advertisement