masthmagaa.com:
ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೂಡುಗೊಪ್ಪ ಎಂಬಲ್ಲಿ ಅತಿಹೆಚ್ಚು 94 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ, ಮಲೆನಾಡಿನ ಅಲ್ಲಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಅಲ್ಲಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಮಳೆ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಅತ್ತ ಮೇಘಸ್ಫೋಟ ಉಂಟಾಗಿದ್ದ ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ನಾಪತ್ತೆಯಾದ 19 ಜನರಿಗಾಗಿ ಶೋಧಕಾರ್ಯ ನಡೀತಿದೆ. ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿಟಿ ಜಿಲ್ಲೆಯಲ್ಲೂ ಪ್ರವಾಹದಲ್ಲಿ ಮೂವರು ನಾಪತ್ತೆಯಾಗಿದ್ಧಾರೆ. ದೆಹಲಿ ಮತ್ತು ಹರಿಯಾಣದಲ್ಲೂ ಇವತ್ತು ಭಾರಿ ಮಳೆಯಾಗಿದೆ.
-masthmagaa.com
Contact Us for Advertisement