masthmagaa.com:
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಮಳೆಯಬ್ಬರ ಜೋರಾಗಿದೆ. ನಗರದ ತಗ್ಗುಪ್ರದೇಶದ ಭಾಗಗಳು ಈಗಾಗಲೇ ಜಲಾವೃತಗೊಂಡಿವೆ. ರಸ್ತೆಗಳು, ಅಂಡರ್ಪಾಸ್ಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ನಿಂದ ಜನ ಪರದಾಡಿದ್ರು. ಇದೀಗ ಫೀಲ್ಡ್ಗೆ ಇಳಿದಿರುವ ಎನ್ಡಿಆರ್ಎಫ್ ತಂಡ ಅಪಾಯದ ಸ್ಥಳಗಳಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದೆ. ಮುಂದಿನ ಹಲವು ದಿನಗಳ ಕಾಲ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ನಗರದಲ್ಲಿ 2015ರ ಬಳಿಕ ಈ ಪ್ರಮಾಣದಲ್ಲಿ ಮಳೆಯಾಗಿರೋದು ಇದೇ ಮೊದಲು.
-masthmagaa.com
Contact Us for Advertisement