masthmagaa.com:
ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸಾರಿಗೆ ಇಲಾಖೆ 50% ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ರಿಯಾಯಿತಿ ಘೋಷಣೆಯಾದ ನಾಲ್ಕು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗಿದ್ದು, 25.42 ಕೋಟಿಗೂ ಅಧಿಕ ಮೊತ್ತದ ದಂಡ ಸಂಗ್ರಹ ಆಗಿದೆ. ಹಾಗೂ ಕೇಸ್ಗಳ ಸಂಖ್ಯೆ ನೋಡಿಕೊಂಡು ಕಾಲಾವಧಿಯನ್ನ ವಿಸ್ತರಿಸೊ ಬಗ್ಗೆ ಚಿಂತನೆಯಿದೆ ಅಂತ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಎಂ.ಎ. ಸಲೀಂ ಹೇಳಿದ್ದಾರೆ. ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್ ಇಲಾಖೆ ಫೆಬ್ರವರಿ 11ರವರೆಗೆ ರಿಯಾಯಿತಿ ನೀಡಿದೆ.
-masthmagaa.com
Contact Us for Advertisement