masthmagaa.com:
ಕೆನಡಾದ ಸೈಮನ್ ಫ್ರೇಸರ್ ವಿಶ್ವವಿದ್ಯಾಲಯದಲ್ಲಿದ್ದ ಮಹಾತ್ಮ ಗಾಂಧೀಜಿಯವ್ರ ಪ್ರತಿಮೆಯನ್ನ ದ್ವಂಸ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತೀಯ ರಾಯಭಾರ ಕಚೇರಿ ಕೆನಡಾ ಅಧಿಕಾರಿಗಳು ಈ ಕುರಿತು ಆದಷ್ಟು ಬೇಗ ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡಿದೆ. ಅಂದ್ಹಾಗೆ ಕಳೆದ ವಾರವಷ್ಟೇ ಖಲಿಸ್ತಾನಿ ಬೆಂಬಲಿಗರು ಕೆನಡಾದ ಒಂಟಾರಿಯೋದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ದ್ವಂಸಗೊಳಿಸಿ ಖಲಿಸ್ತಾನ ಪರ ಘೋಷಣೆ ಬರೆದಿದ್ರು.
-masthmagaa.com
Contact Us for Advertisement