ರಾಜ್ಯದಲ್ಲಿ ಮತ್ತೊಂದು ಬಲಿ.. ಬೆಂಗಳೂರಿನಲ್ಲಿ ವೃದ್ಧ ಸಾವು..!

masthmagaa.com:

ಕೊರೋನಾ ವೈರಸ್​ಗೆ ರಾಜ್ಯದಲ್ಲಿ ಮತ್ತೊಬ್ಬರು ಪ್ರಾಣ ಕಳೆದುಕೊಂಡಿದ್ದು, ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 66 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ವೃದ್ಧರಿಗೆ ವಿಕ್ಟೋರಿಯಾ ಆಸ್ಪತ್ರೆಯ ವೆಂಟಿಲೇಟರ್​ನಲ್ಲಿ ಇಡಲಾಗಿತ್ತು.

ಇತ್ತೀಚೆಗಷ್ಟೇ ಮಣಿಪುರದಿಂದ ಬಂದಿದ್ದ ವೃದ್ಧರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್​ 10ರಂದು ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಸದ್ಯ ಮೃತ ವೃದ್ಧನ ಸಂಪರ್ಕಕ್ಕೆ ಬಂದ ಪತ್ನಿ, ಪುತ್ರ, ಅಳಿಯನ ಪರೀಕ್ಷೆ ನಡೆಸಲಾಗಿದೆ. ಪ್ರಾಥಮಿಕ ವರದಿಯಲ್ಲಿ ಅವರಿಗೆ ನೆಗೆಟಿವ್ ಬಂದಿದೆ.

ಈ ಮೂಲಕ ಬೆಂಗಳೂರಿನಲ್ಲಿ ಕೊರೋನಾಗೆ ಮೂರನೇ ವ್ಯಕ್ತಿ ಬಲಿಯಾದಂತಾಗಿದೆ. ಇದಕ್ಕೂ ಮೊದಲು ಇಬ್ಬರು ಮೃತಪಟ್ಟಿದ್ದರು.

-masthmagaa.com

Contact Us for Advertisement

Leave a Reply