masthmagaa.com:
ಕೊರೋನಾ ವೈರಸ್ಗೆ ರಾಜ್ಯದಲ್ಲಿ ಮತ್ತೊಬ್ಬರು ಪ್ರಾಣ ಕಳೆದುಕೊಂಡಿದ್ದು, ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 66 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ವೃದ್ಧರಿಗೆ ವಿಕ್ಟೋರಿಯಾ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಇಡಲಾಗಿತ್ತು.
ಇತ್ತೀಚೆಗಷ್ಟೇ ಮಣಿಪುರದಿಂದ ಬಂದಿದ್ದ ವೃದ್ಧರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 10ರಂದು ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಸದ್ಯ ಮೃತ ವೃದ್ಧನ ಸಂಪರ್ಕಕ್ಕೆ ಬಂದ ಪತ್ನಿ, ಪುತ್ರ, ಅಳಿಯನ ಪರೀಕ್ಷೆ ನಡೆಸಲಾಗಿದೆ. ಪ್ರಾಥಮಿಕ ವರದಿಯಲ್ಲಿ ಅವರಿಗೆ ನೆಗೆಟಿವ್ ಬಂದಿದೆ.
ಈ ಮೂಲಕ ಬೆಂಗಳೂರಿನಲ್ಲಿ ಕೊರೋನಾಗೆ ಮೂರನೇ ವ್ಯಕ್ತಿ ಬಲಿಯಾದಂತಾಗಿದೆ. ಇದಕ್ಕೂ ಮೊದಲು ಇಬ್ಬರು ಮೃತಪಟ್ಟಿದ್ದರು.
-masthmagaa.com
Contact Us for Advertisement