masthmagaa.com:
ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿ ತಲೆಮರೆಸಿಕೊಂಡಿದ್ದ ರಿಯಾಜುದ್ದೀನ್ ಎಂಬಾತನನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಬಿಬಿಎಂಪಿ ಮಾಜಿ ಮೇಯರ್ ಮತ್ತು ಕಾಂಗ್ರೆಸ್ ನಾಯಕ ಸಂಪತ್ರಾಜ್ ಹಾಗೂ ಮಾಜಿ ಕಾರ್ಪೊರೇಟರ್ ಜಾಕಿರ್ನ ಸ್ನೇಹಿತ ಕೂಡ ಹೌದು. ಇದೀಗ ಸಂಪತ್ ರಾಜ್ ಹಾಗೂ ಜಾಕಿರ್ ಇಬ್ಬರೂ ತಲೆಮರೆಸಿಕೊಂಡಿದ್ದಾರೆ.
ಅಂದ್ಹಾಗೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ರಿಯಾಜುದ್ದೀನ್ ಸಹಾಯ ಮಾಡಿ ಆಶ್ರಯ ನೀಡಿದ್ದ. ತನ್ನ ಕಾರಿನಲ್ಲಿ ಆರೋಪಿಗಳನ್ನ ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್ಗೆ ಕರೆದೊಯ್ದಿದ್ದ. ಅಲ್ಲಿಯೇ ಆರೋಪಿಗಳು ಕೆಲ ದಿನಗಳ ಕಾಲ ಉಳಿದುಕೊಂಡಿದ್ದರು. ಬಳಿಕ ಅಲ್ಲಿಂದ ಬೇರೆಕಡೆ ಹೋಗಿದ್ದಾರೆ. ಸದ್ಯ ಈತನನ್ನ ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಸಂಪತ್ರಾಜ್ ಬಂಧನಕ್ಕೂ ಬಲೆ ಬೀಸಲಾಗಿದೆ ಅಂತ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
-masthmagaa.com
Contact Us for Advertisement