masthmagaa.com:

ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿ ತಲೆಮರೆಸಿಕೊಂಡಿದ್ದ ರಿಯಾಜುದ್ದೀನ್ ಎಂಬಾತನನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಬಿಬಿಎಂಪಿ ಮಾಜಿ ಮೇಯರ್ ಮತ್ತು ಕಾಂಗ್ರೆಸ್ ನಾಯಕ ಸಂಪತ್​ರಾಜ್ ಹಾಗೂ ಮಾಜಿ ಕಾರ್ಪೊರೇಟರ್ ಜಾಕಿರ್​ನ ಸ್ನೇಹಿತ ಕೂಡ ಹೌದು. ಇದೀಗ ಸಂಪತ್ ರಾಜ್ ಹಾಗೂ ಜಾಕಿರ್ ಇಬ್ಬರೂ ತಲೆಮರೆಸಿಕೊಂಡಿದ್ದಾರೆ.

ಅಂದ್ಹಾಗೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ರಿಯಾಜುದ್ದೀನ್​ ಸಹಾಯ ಮಾಡಿ ಆಶ್ರಯ ನೀಡಿದ್ದ. ತನ್ನ ಕಾರಿನಲ್ಲಿ ಆರೋಪಿಗಳನ್ನ ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್‌ಗೆ ಕರೆದೊಯ್ದಿದ್ದ. ಅಲ್ಲಿಯೇ ಆರೋಪಿಗಳು ಕೆಲ ದಿನಗಳ ಕಾಲ ಉಳಿದುಕೊಂಡಿದ್ದರು. ಬಳಿಕ ಅಲ್ಲಿಂದ ಬೇರೆಕಡೆ ಹೋಗಿದ್ದಾರೆ. ಸದ್ಯ ಈತನನ್ನ ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಸಂಪತ್​ರಾಜ್ ಬಂಧನಕ್ಕೂ ಬಲೆ ಬೀಸಲಾಗಿದೆ ಅಂತ ಸಿಸಿಬಿ ಜಂಟಿ‌ ಕಮಿಷನರ್ ಸಂದೀಪ್ ಪಾಟೀಲ್​ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply