ಬಿಜೆಪಿ ಕರೆದ್ರೆ ಸೋಮಣ್ಣ ಪರವಾಗಿಯೂ ಪ್ರಚಾರ ಮಾಡ್ತೀನಿ: ಶಿವರಾಜ್‌ ಕುಮಾರ್

masthmagaa.com:

ಹ್ಯಾಟ್ರಿಕ್‌ ಹೀರೋ ಶಿವರಾಜ್‌‌ ಕುಮಾರ್ ಅವ್ರು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಕ್ಕೆ, ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಅದ್ರಲ್ಲೂ ಮುಖ್ಯವಾಗಿ ಮೈಸೂರು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಶಿವರಾಜ್ ಕುಮಾರ್‌ ಅವರ ನಡೆಗೆ ಅಸಮಾಧಾನ ಹೊರಹಾಕಿದ್ರು. ಇದೀಗ ಈ ಚರ್ಚೆಗಳಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ. ವಿ ಸೋಮಣ್ಣ, ಪ್ರತಾಪ್‌ ಸಿಂಹ ನಮಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ಗೌರವ ಇದೆ. ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಂಗೆ ಗೊತ್ತಿದ್ದಿಲ್ಲ. ಕರೆದ್ರೆ ಅವರ ಪರವಾಗಿಯೂ ಪ್ರಚಾರಕ್ಕೆ ಹೋಗ್ತೇನೆ. ಬಿಜೆಪಿಯವರು ಯಾರೂ ನನ್ನನ್ನ ಸಂಪರ್ಕ ಮಾಡಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply