masthmagaa.com:

ಸ್ವಾಮಿ ಅಲಿಯಾಸ್ ಯುವರಾಜ್ ಮತ್ತು ಬೇರೊಬ್ಬರ ಅಕೌಂಟ್​ನಿಂದ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ₹75 ಲಕ್ಷ ಹಣ ವರ್ಗಾವಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ರಾಧಿಕಾ ಕುಮಾರಸ್ವಾಮಿ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾದ್ರು. ಅವರನ್ನ ಸುಮಾರು 4 ಗಂಟೆಗಳ ಕಾಲ ವಿಚಾರಣೆ ನಡೆಸಿ ಕಳಿಸಲಾಗಿದೆ. ಅವರ ಹೇಳಿಕೆಯನ್ನ ದಾಖಲಿಸಲಾಗಿದೆ. ಅಗತ್ಯಬಿದ್ರೆ ಮತ್ತೆ ವಿಚಾರಣೆಗೆ ಹಾಜರಾಗಬೇಕು ಅಂತ ರಾಧಿಕಾ ಕುಮಾಸ್ವಾಮಿಗೆ ಸೂಚಿಸಲಾಗಿದೆ. ರಾಧಿಕಾ ಕುಮಾರಸ್ವಾಮಿ ಕೂಡ ಮತ್ತೆ ವಿಚಾರಣೆಗೆ ಕರೆದ್ರೆ ಹಾಜರಾಗ್ತೀನಿ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply