ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಯೋಪಿಕ್ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಆಕೆಯನ್ನು ಮೈಸೂರಿನಿಂದ ವರ್ಗಾವಣೆಗೊಳಿಸಿರುವ ಬಗ್ಗೆ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿ ಒಂದು ಇನ್ಸ್ಟ ಗ್ರಾಂ ಪೋಸ್ಟ್ ಹಾಕಿದ್ದಾರೆ.
ಇನ್ ಸ್ಟಾಗ್ರಾಮ್ ನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ”ಪ್ರಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುವುದಿಲ್ಲ” ಎಂದಿದ್ದಾರೆ.
ಇದೇ ವೇಳೆ ರೋಹಿಣಿ ಸಿಂಧೂರಿಯವರ ಕಾರ್ಯವೈಖರಿ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವ ರಮ್ಯ, ”ಸಿಂಧೂರಿ ಕಾರ್ಯ ವೈಖರಿಯನ್ನು ನಾನು ಅಂದು ಮೆಚ್ಚಿದ್ದೇನೆ, ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು, ಪ್ರಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಹಾಗೂ ಬೆಂಬಲಿಸುತ್ತಿಲ್ಲ” ಎಂದಿದ್ದಾರೆ.
Contact Us for Advertisement