masthmagaa.com:
ಕರ್ನಾಟಕದ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಸಮೀಪಿಸ್ತಿದ್ದಂತೆ ರಾಜ್ಯ ಬಿಜೆಪಿ ವಿರುದ್ದ ಕಾಂಗ್ರೆಸ್, ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಹಾಗೂ ಮುಸ್ಲಿಮರನ್ನ ಟಾರ್ಗೆಟ್ ಮಾಡಿ SC, ST ಹಾಗೂ OBC ಮೀಸಲಾತಿ ವಿಚಾರವಾಗಿ ರಾಜ್ಯ ಬಿಜೆಪಿ ತನ್ನ ಸೋಶಿಯಲ್ ಮೀಡಿಯಾದಲ್ಲಿ ಎನಿಮೇಟೆಡ್ ಪೋಸ್ಟ್ವೊಂದನ್ನ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್, ʻಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆಗೆ ಪ್ರಚೋದನೆ ನೀಡ್ತಿದೆʼ ಅಂತೇಳಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹೀಗಾಗಿ ಬೆಂಗಳೂರಿನ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಪ್ರಕರಣ ದಾಖಲಾಗಿದೆ.
-masthmagaa.com
Contact Us for Advertisement