masthmagaa.com:
ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್ಮುಖ್ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಲು ಸಿಎಂ ಉದ್ಧವ್ ಠಾಕ್ರೆ ನಿರ್ಧರಿಸಿದ್ದಾರೆ. ಈ ಬಗ್ಗೆ ಗೃಹಸಚಿವ ಅನಿಲ್ ದೇಶ್ಮುಖ್ ಮಾಹಿತಿ ನೀಡಿದ್ದಾರೆ. ಈ ಹಿಂದೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದ ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಪತ್ರೆ ಬರೆದು ಅನಿಲ್ ದೇಶ್ ಮುಖ್ ವಿರುದ್ಧ ಗಂಭೀರ ಆರೋಪ ಮಾಡಿದ್ರು.
ತಿಂಗಳಿಗೆ 100 ಕೋಟಿ ಕಲೆಕ್ಷನ್ ಮಾಡುವ ಟಾರ್ಗೆಟ್ ನೀಡಿದ್ರು ಅಂತ ಅಂತೆಲ್ಲಾ ಪತ್ರದಲ್ಲಿ ಉಲ್ಲೇಖಿಸಿದ್ರು. ಈ ಬಗ್ಗೆ ಭಾರಿ ಟೀಕೆ ಕೇಳಿ ಬಂದ ಬೆನ್ನಲ್ಲೇ ಎನ್ಸಿಪಿ ಪಕ್ಷದವರಾದ ಗೃಹಸಚಿವ ಅನಿಲ್ ದೇಶ್ಮುಖ್ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದು ಉನ್ನತ ತನಿಖೆ ನಡೆಸುವಂತೆ ಮನವಿ ಮಾಡಿದ್ರು. ಅದರಂತೆ ಈಗ ಹೈಕೋರ್ಟ್ನ ನಿವೃತ್ತ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಲು ಸಿಎಂ ಒಪ್ಪಿಕೊಂಡಿದ್ದಾರೆ ಅಂತ ಅನಿಲ್ ದೇಶ್ ಮುಖ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
-masthmagaa.com
Contact Us for Advertisement