masthmagaa.com:
ಕೊಲೆ ಪ್ರಕರಣದಲ್ಲಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿಂದ ಜಾಮೀನಿನ ಮೇಳೆ ರಿಲೀಸ್ ಆಗಿದ್ದಾರೆ. ಜೈಲಿಂದ ಹೊರಬರುತ್ತಿದ್ದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕುಲಕರ್ಣಿ ಹಣೆಗೆ ತಿಲಕವಿಟ್ಟು, ಆರತಿ ಮಾಡಿ, ನಾಳೆ ರಕ್ಷಾ ಬಂಧನ ಹಿನ್ನೆಲೆ ರಾಕಿ ಕಟ್ಟಿದ್ರು. ಇನ್ನು ಜೈಲಿನ ಹೊರಗೆ ಭಾರಿ ಸಂಖ್ಯೆಯಲ್ಲಿ ಕುಲಕರ್ಣಿ ಟೀಮು ಜಮಾಯಿಸಿತ್ತು. ಕೋವಿಡ್ ನಿಯಮ, ವೀಕೆಂಡ್ ಕರ್ಫ್ಯೂ ಎಲ್ಲವನ್ನ ಮರೆತಿದ್ರು. ಸ್ವತಃ ವಿನಯ್ ಕುಲಕರ್ಣಿ ಸೇರಿದಂತೆ ಹಲವರು ಮಾಸ್ಕ್ ಧರಿಸಿರಲಿಲ್ಲ. ಇದರ ಪರಿಣಾಮ ಜೈಲಿಂದ ರಿಲೀಸ್ ಆಗ್ತಿದ್ದಂತೇ ಕುಲಕರ್ಣಿ ವಿರುದ್ಧ ಬೆಳಗಾವಿ ಗ್ರಾಮಾಂತರ ಠಾಣೆ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.
-masthmagaa.com
Contact Us for Advertisement