masthmagaa.com:
ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ನ ನಾಲ್ಕನೆ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಗಗನಸಖಿ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಮೃತ ಗಗನ ಸಖಿ ಅರ್ಚನಾಳ ಬಾಯ್ಫ್ರೆಂಡ್ ಆದೇಶ್ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಅಂತ ಪೊಲೀಸರ ತನಿಖೆಯಿಂದ ಬಯಲಾಗಿದೆ. ಆರೋಪಿ ಆದೇಶ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನನ್ನ ಬಂಧಿಸಿರೋದಾಗಿ ಪೊಲೀಸರು ಹೇಳಿದ್ದಾರೆ. ಹಿಮಾಚಲಪ್ರದೇಶ ಮೂಲದ ಅರ್ಚನಾ ಹಾಗೂ ಕೇರಳ ಮೂಲದ ಆದೇಶ್ ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿ ಇಬ್ಬರು ಪ್ರೀತಿಸುತ್ತಿದ್ದರು. ಅರ್ಚನಾ ದುಬೈ ಏರ್ಲೈನ್ಸ್ನಲ್ಲಿ ಗಗನಸಖಿಯಾಗಿದ್ದರೆ, ಆದೇಶ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆದೇಶ್ನ್ನ ಭೇಟಿಯಾಗೋಕೆ ಬೆಂಗಳೂರಿಗೆ ಬಂದಿದ್ದ ಅರ್ಚನಾ ಹಾಗೂ ಆದೇಶ್ ನಡುವೆ ಮದುವೆ ವಿಚಾರವಾಗಿ ಗಲಾಟೆ ನಡೆದಿದ್ದು, ಮದುವೆ ಆಗೋಕೆ ಆದೇಶ್ಗೆ ಇಷ್ಟವಿಲ್ಲದ ಕಾರಣ ಅರ್ಚನಾಳನ್ನ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಅಂತ ಪೊಲೀಸರು ಹೇಳಿದ್ದಾರೆ.
-masthmagaa.com
Contact Us for Advertisement