ಚಂಡೀಗಢ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶವನ್ನು ವಿಭಜಿಸಲು ಯತ್ನಿಸುತ್ತಿದೆ. ಹೀಗಾಗಿ ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂದು ಸಿಖ್ ಸಂಘ ಅಕಲ್ ತಕ್ತ್ ಆಗ್ರಹಿಸಿದೆ. ಚಂಡೀಗಢದಲ್ಲಿ ಮಾತನಾಡಿದ ಅಕಲ್ ತಕ್ತ್ ಮುಖ್ಯಸ್ಥ ಗಿಯಾನಿ ಹರ್ಪ್ರೀತ್ ಸಿಂಗ್, ಕೇಂದ್ರದಲ್ಲಿ ಆರ್ಎಸ್ಎಸ್ ವಿಚಾರಧಾರೆಯನ್ನೇ ಅಳವಡಿಸಿಕೊಂಡಿರುವ ಬಿಜೆಪಿ ಅಧಿಕಾರದಲ್ಲಿದೆ. ಆರ್ಎಸ್ಎಸ್ ದೇಶವನ್ನು ವಿಭಜಿಸಿ ಆಳಲು ಯತ್ನಿಸುತ್ತಿದೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದು ದೇಶಕ್ಕೆ ಮಾರಕವಾಗಿದ್ದು, ನಾಶಕ್ಕೆ ಕಾರಣವಾಗಲಿದೆ ಎಂದು ಹೇಳಿದ್ದಾರೆ. ವಿಜಯದಶಮಿಯಂದು ಮಾತನಾಡಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಭಾರತ ಹಿಂದೂಗಳ ದೇಶ ಎಂದು ಹೇಳಿದ್ದರು.
ಸಿಖ್ ಸಮುದಾಯ ಮತ್ತು ಆರ್ಎಸ್ಎಸ್ ನಡುವೆ ವಾಕ್ಸಮರ ನಡೆದಿರೋದು ಇದೇ ಮೊದಲಲ್ಲ. ಕಳೆದ ವಾರ ಶಿರೋಮಣಿ ಗುರುದ್ವಾರ ಪ್ರಬಂದಕ್ ಕಮಿಟಿ ಅಧ್ಯಕ್ಷ ಗೋವಿಂದ್ ಸಿಂಗ್ ಲೊಂಗೊವಲ್ ಕೂಡ ಮೋಹನ್ ಭಾಗವತ್ ಅವರ ಹಿಂದೂ ರಾಷ್ಟ್ರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.
Contact Us for Advertisement