masthmagaa.com:
ನಾಳೆಯಿಂದ ಮಳೆಗಾಲದ ಸಂಸತ್ ಅಧಿವೇಶನ ಶುರುವಾಗಲಿದೆ. ಅದಕ್ಕೂ ಮುನ್ನ ಇವತ್ತು ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ರು. ಸಂಸತ್ ಕಲಾಪವನ್ನು ಸುಗಮವಾಗಿ ನಡೆಯಲು ಬಿಡುವಂತೆ ಮನವಿ ಮಾಡಲು ಈ ಸಭೆ ಕರೆಯಲಾಗಿತ್ತು. ಪ್ರತಿ ಅಧಿವೇಶನಕ್ಕೂ ಮುನ್ನ ಈ ರೀತಿ ಸಭೆ ಕರೆಯೋದು, ಗಲಾಟೆ ಮಾಡದೇ ಅಧಿವೇಶನಕ್ಕೆ ಅವಕಾಶ ನೀಡಿ ಅಂತ ಮನವಿ ಮಾಡೋದು ಮೊದಲಿಂದಲೂ ನಡೆದುಕೊಂಡು ಬಂದಿದೆ. ಈ ಅಧಿವೇಶನದಲ್ಲಿ ಸರ್ಕಾರ 30 ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದೆ. ಇನ್ನು ಕೊರೋನಾ, ಹಣದುಬ್ಬರ, ತೈಲದರ ಏರಿಕೆ, ರಫೇಲ್ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಿದ್ಧವಾಗಿವೆ. ನಾಳೆಯಿಂದ ಆಗಸ್ಟ್ 13ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಲೋಕಸಭೆಯಲ್ಲಿ ಕಾಂಗ್ರೆಸ್ನ ನಾಯಕತ್ವವನ್ನು ಬೇರೆಯವರಿಗೆ ವಹಿಸಲಾಗುತ್ತೆ ಅನ್ನೋ ಚರ್ಚೆ ಶುರುವಾಗಿತ್ತು. ಆದ್ರೆ ಲೋಕಸಭೆ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಮಾಡಿಲ್ಲ. ಬದಲಾಗಿ ಅಧಿರ್ ರಂಜನ್ ಚೌಧರಿಯೇ ಮುಂದುವರಿಯಲಿದ್ದಾರೆ. ಇನ್ನುಳಿದಂತೆ ಜಿ 23 ಬಂಡಾಯ ನಾಯಕರ ಪೈಕಿ ಕೆಲವರಿಗೆ ಕೆಲವೊಂದು ಜವಾಬ್ದಾರಿಗಳನ್ನು ನೀಡಲಾಗಿದೆ.
-masthmagaa.com
Contact Us for Advertisement