masthmagaa.com:
ದೆಹಲಿಯ ನಿಜಾಮುದ್ದಿನ್ ಮರ್ಕಝ್ ಮುಸ್ಲಿಂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಂಧ್ರಪ್ರದೇಶಕ್ಕೆ ಬಂದ 43 ಜನರಿಗೂ ಕೊರೋನಾ ವೈರಸ್ ತಗುಲಿರೋದು ದೃಢಪಟ್ಟಿದೆ ಅಂತ ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ. ಇಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ 342 ಜನ ಕೂಡ ಭಾಗವಹಿಸಿದ್ದರು ಅಂತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಇದರಲ್ಲಿ 200 ಮಂದಿಯನ್ನ ಈಗಾಗಲೇ ಕ್ವಾರಂಟೈನ್ನಲ್ಲಿ ಇಡಲಾಗಿದ್ದು, ಕೊರೋನಾ ಪರೀಕ್ಷೆ ನಡೆಸಲಾಗ್ತಿದೆ.
ಮಾರ್ಚ್ ಮೊದಲೆರಡು ವಾರದಲ್ಲಿ ದೆಹಲಿಯ ನಿಜಾಮುದ್ದಿನ್ ಮರ್ಕಝ್ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶ, ವಿದೇಶಗಳ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದ ಬಳಿಕ ಬಹುತೇಕರು ಅವರವರ ರಾಜ್ಯಕ್ಕೆ ವಾಪಸ್ ಬಂದ್ರೆ, ಸುಮಾರು 2 ಸಾವಿರ ಜನ ಅದೇ ಕಟ್ಟಡದಲ್ಲಿ ವಾಸವಿದ್ದರು. ಈ ಪೈಕಿ ಹಲವರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದರೂ ಯಾರೂ ಕೂಡ ಸರ್ಕಾರಕ್ಕಾಗಲೀ, ಅಧಿಕಾರಿಗಳಿಗಾಗಲೀ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಬಳಿಕ ಆಸ್ಪತ್ರೆಗೆ ಬಂದವರ ಮೂಲವನ್ನು ಕೆದಕಿದಾಗ ಕೊರೋನಾ ಸ್ಫೋಟದ ಕೇಂದ್ರಬಿಂದು ಈ ತಬ್ಲಿಘಿ ಜಮಾತ್ ಕಾರ್ಯಕ್ರಮ ಅನ್ನೋದು ಗೊತ್ತಾಗಿದೆ. ಸದ್ಯ ಮರ್ಕಝ್ ಕಟ್ಟಡವನ್ನು ಖಾಲಿ ಮಾಡಿಸಿದ್ದು, ಸೋಂಕಿತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
-masthmagaa.com
Contact Us for Advertisement