ಗಲಭೆಕೋರರ ಬ್ಯಾನರ್ ಪ್ರದರ್ಶನ, ಯೋಗಿ ಸರ್ಕಾರಕ್ಕೆ ಚಾಟಿ ಬೀಸಿದ ಕೋರ್ಟ್

masthmagaa.com

ಉತ್ತರ ಪ್ರದೇಶ: ಲಖನೌನಲ್ಲಿ ನಡೆದ ಸಿಎಎ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಗಳ ಚಿತ್ರ ಮತ್ತು ವಿವರ ಪ್ರಕಟಿಸಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್‌ ಚಾಟಿ ಬೀಸಿದೆ. ಈ ಸಂಬಂಧ ಭಾನುವಾರ ವಿಶೇಷ ವಿಚಾರಣೆ ನಡೆಸಿದ ಕೋರ್ಟ್, ಪ್ರತಿಭಟನಾಕಾರರ ಚಿತ್ರ ಮತ್ತು ವಿವರಗಳನ್ನ ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ ಅಂತ ಹೇಳಿದೆ.

2019ರಲ್ಲಿ ಲಖನೌನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ 60 ಮಂದಿಯ ಭಾವಚಿತ್ರಗಳನ್ನು ಲಖನೌ ನಗರಾಡಳಿತ ಪ್ರಮುಖ ವೃತ್ತಗಳಲ್ಲಿ ಪ್ರದರ್ಶಿಸಿತ್ತು. ಸಾರ್ವಜನಿಕ ಆಸ್ತಿಯನ್ನು ಹಾಳುಮಾಡಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು.

-masthmagaa.com

Contact Us for Advertisement

Leave a Reply