masthmagaa.com:
ತಬ್ಲಿಘಿ ಜಮಾತ್ ವಿಚಾರದಲ್ಲಿ ಒಬ್ಬರು ಮಾಡಿದ ತಪ್ಪಿಗೆ ಎಲ್ಲರನ್ನೂ ದೂರೋದು ಸರಿಯಲ್ಲ.. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದಿದ್ದ ಸಿಎಂ ಯಡಿಯೂರಪ್ಪನವರಿಗೆ ಹೆಚ್.ಡಿ.ಕುಮಾರಸ್ವಾಮಿ ಜೈ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಕೊರೋನಾದ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕೋಮು ದ್ವೇಷ ಹರಡುವವರ ವಿರುದ್ಧ ಯಡಿಯೂರಪ್ಪ ಅವರ ನಿಲುವನ್ನು ನಾನು ಸ್ವಾಗತಿಸುತ್ತೇನೆ ಮತ್ತು ತುಂಬು ಹೃದಯದಿಂದ ಬೆಂಬಲಿಸುತ್ತೇನೆ. ಆದ್ರೆ ಸಿಎಂ ಎಚ್ಚರಿಕೆ ನೀಡಿದ್ರೂ ಸಿ.ಟಿ ರವಿ, ಶೋಭಾ ಕರಂದ್ಲಾಜೆ ಅವರಂಥ ಬಿಜೆಪಿ ನಾಯಕರು ಕೋಮು ದ್ವೇಷ ಹರಡುತ್ತಿದ್ದಾರೆ. ಯಡಿಯೂರಪ್ಪ ತಮ್ಮ ಪಕ್ಷದವರಿಗೆ ಸುಮ್ಮನಿರುವಂತೆ ಆದೇಶ ನೀಡಬೇಕು ಅಂತ ಒತ್ತಾಯಿಸಿದ್ರು.
ಇನ್ನು ಕೆಲವು ಮಾಧ್ಯಮಗಳು ಕೂಡ ಕೋಮು ದ್ವೇಷವನ್ನು ಹರಡುವ ಕೆಲಸ ಮಾಡುತ್ತಿವೆ. ಅಂಥ ಮಾಧ್ಯಮಗಳ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಬೇಕು ಅಂತ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
-masthmagaa.com
Contact Us for Advertisement