masthmagaa.com:
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಸಿಎಂ ಯಡಿಯೂರಪ್ಪ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಬಿಜೆಪಿ ನಾಯಕರಿಗೆ ಕೊರೋನಾ ಸೋಂಕು ದೃಢಪಡಲು ಸನಾತನ ಹಿಂದೂ ಧರ್ಮದ ನಂಬಿಕೆಗಳನ್ನು ನಿರ್ಲಕ್ಷಿಸಿದ್ದೇ ಕಾರಣ ಅಂತ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದಿಗ್ವಿಜಯ್ ಸಿಂಗ್, ‘ಸನಾತನ ಹಿಂದೂ ಧರ್ಮದ ನಂಬಿಕೆಗಳನ್ನು ನಿರ್ಲಕ್ಷಿಸಿದ ಪರಿಣಾಮವಾಗಿ ರಾಮ ಮಂದಿರ ಭೂಮಿ ಪೂಜೆಯಲ್ಲಿ ಭಾಗವಹಿಸಬೇಕಾದ ಎಲ್ಲಾ ಪುರೋಹಿತರಿಗೆ ಸೋಂಕು ದೃಢಪಟ್ಟಿದೆ. ಉತ್ತರ ಪ್ರದೇಶದ ಸಚಿವೆ ಕಮಲ್ ರಾಣಿ ವರುಣ್ ಕೊರೋನಾದಿಂದ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷರಿಗೆ ಸೋಂಕು ತಗುಲಿ ಆಸ್ಪತ್ರೆಯಲ್ಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಬಂದು ಆಸ್ಪತ್ರೆಯಲ್ಲಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ಗೆ ಸೋಂಕು ತಗುಲಿ ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್ ಬಂದು ಆಸ್ಪತ್ರೆಯಲ್ಲಿದ್ದಾರೆ’ ಅಂತ ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ದಿಗ್ವಿಜಯ್ ಸಿಂಗ್, ‘ತಪ್ಪಿಗಾಗಿ ಕ್ಷಮೆಯಾಚಿಸುತ್ತೇನೆ. ಅಮಿತ್ ಶಾ ಅವರು ಗೃಹ ಸಚಿವರೇ ಹೊರತು ಪ್ರಧಾನ ಮಂತ್ರಿಯಲ್ಲ. ಕ್ಷಮಿಸಿ’ ಅಂತ ಬರೆದುಕೊಂಡಿದ್ದಾರೆ.
४- भारत के गृह मंत्री अमित शाह कोरोना पोजिटिव अस्पताल में।
५- मध्यप्रदेश के भाजपा के मुख्यमंत्री व भाजपा के प्रदेश अध्यक्ष कोरोना पोजिटिव अस्पताल में
६- कर्नाटक के भाजपा के मुख्यमंत्री कोरोना पोजिटिव अस्पताल में।— digvijaya singh (@digvijaya_28) August 3, 2020
त्रुटि के लिए क्षमा प्रार्थी हूँ। अमित शाह गृहमंत्री हैं ना कि प्रधानमंत्री। क्षमा करें।
— digvijaya singh (@digvijaya_28) August 3, 2020
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಅವರು ದಿಗ್ವಿಜಯ್ ಸಿಂಗ್ ಅವರನ್ನು ರಾಕ್ಷಸರಿಗೆ ಹೋಲಿಸಿದ್ದಾರೆ. ‘ನಾವು ಅನಾದಿ ಕಾಲದಿಂದಲೂ ನೋಡುತ್ತಿದ್ದೇವೆ, ಏನಾದರೂ ಒಳ್ಳೆಯದು ಸಂಭವಿಸಿದಾಗ, ಅಸುರರು ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ದಿಗ್ವಿಜಯ್ ಸಿಂಗ್ ಅದೇ ರೀತಿ ಮಾಡುತ್ತಿದ್ದಾರೆ’ ಅಂತ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
-masthmagaa.com
Contact Us for Advertisement