masthmagaa.com:
ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಹನುಮಗಿರಿಯಲ್ಲಿ ಭಾರತ ಮಾತಾ ಮಂದಿರವನ್ನ ಲೋಕಾರ್ಪಣೆ ಮಾಡಲಿದ್ದಾರೆ. ನಂತ್ರ ಪುತ್ತೂರಿನ ಕ್ಯಾಂಪ್ಕೊದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅಡಿಕೆ ಕೃಷಿಕರನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅಮಿತ್ ಶಾ ಮಂಗಳೂರಿನಲ್ಲಿ ಬೃಹತ್ ರೋಡ್ ಶೋನಲ್ಲಿ ಭಾಗಿಯಾಗೋ ಪ್ಲಾನ್ ಇತ್ತು. ಆದರೆ ರೋಡ್ ಶೋ ಮಾರ್ಗ ಮಧ್ಯದಲ್ಲಿಯೇ ಬರೋ ಪದವಿನಂಗಡಿಯಲ್ಲಿ ಕೊರಗಜ್ಜನ ಕೋಲ ನಡೆಯೋ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದುಗೊಳಿಸಲಾಗಿದೆ.
-masthmagaa.com
Contact Us for Advertisement