masthmagaa.com:
ಅಮೃತ್ ನೋನಿಯ ವ್ಯಾಲ್ಯೂ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಶಿವಮೊಗ್ಗ ನಗರದ ಜನರಿಗೆ 24ಗಂಟೆ ಉಚಿತ ಆಂಬುಲೆನ್ಸ್ ಸೇವೆಯನ್ನ ಒದಗಿಸಲಾಗುತ್ತೆ. ಇದನ್ನ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಕೆ.ಎಸ್ ಈಶ್ವರಪ್ಪನವರು ಚೇಂಬರ್ ಆಫ್ ಕಾಮರ್ಸ್ ನಲ್ಲಿ ಚಾಲನೆ ನೀಡಿದ್ದಾರೆ.
ಕೊರೋನಾ ಪ್ಯಾಂಡೆಮಿಕ್ ಸಂದರ್ಭದಲ್ಲಿ ಇಡೀ ದೇಶ ಆಂಬ್ಯುಲೆನ್ಸ್ ಸೇರಿದಂತೆ ವೈಧ್ಯಕೀಯ ಸೌಲಭ್ಯಗಳ ಕೊರತೆಯಿಂದ ಒದ್ದಾಡುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಕೈಲಾದ ಸಹಾಯವನ್ನ ದೇಶಕ್ಕೆ ನೀಡುವುದು ಮುಖ್ಯವಾಗುತ್ತದೆ. ಹೀಗಾಗಿ ಇದುವರೆಗು ಅಮೃತ್ ನೋನಿ ಪ್ರಾಡಕ್ಟ್ಗಳ ಮೂಲಕ ಜನರ ಆರೋಗ್ಯ ವೃದ್ಧಿಗೆ ಕೊಡುಗೆ ನೀಡಿದ್ದ ವ್ಯಾಲ್ಯೂ ಪ್ರೊಡಕ್ಟ್ಸ್ ಕಂಪೆನಿ ಈಗ ವ್ಯಾಲ್ಯೂ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮೂಲಕ ಮಹಾಮಾರಿ ಎದುರಿಸಲು ತನ್ನದೆ ಆದ ಕೊಡುಗೆ ನೀಡಲು ಮುಂದಾಗಿದೆ.
-masthmagaa.com
Contact Us for Advertisement