ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ! ಈವಾಗ್ಯಾರು?

masthmagaa.com:

ಸರ್ಕಾರ 40 ಪರ್ಸೆಂಟ್‌ ಕಮಿಷನ್‌ ಅಂದ್ರೆ ಲಂಚ ಪಡೆಯುತ್ತಿದೆ ಅಂತ ಆರೋಪಿಸಿ ನಂತ್ರ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್‌ ನಿವಾಸಕ್ಕೆ ಇವತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದು, ಪಕ್ಷದ ವತಿಯಿಂದ ಸಂತೋಷ್‌ ಕುಟುಂಬಕ್ಕೆ 11 ಲಕ್ಷ ಪರಿಹಾರ ಚೆಕ್‌ ನೀಡಿದ್ದಾರೆ. ಜೊತೆಗೆ ಸರ್ಕಾರ ಒಂದು ಕೋಟಿ ರುಪಾಯಿ ನೀಡ್ಬೇಕು ಅಂತ ಆಗ್ರಹಿಸಿದ್ದಾರೆ. ಇನ್ನೊಂದ್‌ ಕಡೆ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ ಆಗಿದೆ. ಮಂಗಳೂರು ಮೂಲದ ಮೆಡಿಕಲ್‌ ರೆಪ್‌ ಒಂಬ್ರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್‌ ಆತ್ಮಹತ್ಯೆ ಬಳಿಕ ಲಾಡ್ಜ್‌ ಹೆಸರು ಬದಲಿಸಿದ್ದರು ಆದ್ರೆ ಈಗ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply