masthmagaa.com:
ರಾಜ್ಯ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ರಚಿಸಿ ನೂರು ದಿನಕ್ಕೂ ಹೆಚ್ಚು ದಿನಗಳು ಕಳೆದಿವೆ. ಅದ್ರೆ ಇಲ್ಲಿಯವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಲೀಗಲ್ ನೋಟಿಸ್ ಜಾರಿಯಾಗಿದೆ. ಈ ಸಂಬಂಧ ವಕೀಲ ಎನ್ ಪಿ ಅಮೃತೇಶ್ ಅನ್ನೋರು ಲೀಗಲ್ ನೋಟಿಸ್ ನೀಡಿದ್ದಾರೆ. ಜೊತೆಗೆ ನೋಟಿಸ್ ದೊರೆತ 10 ದಿನಗಳ ಒಳಗೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಶಾಸಕಾಂಗ ಸಭೆ ಕರೆಯುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ನಿರ್ದೇಶಿಸಬೇಕು. ಅಲ್ದೆ ವಿಪಕ್ಷ ನಾಯಕನ ಆಯ್ಕೆಯನ್ನು ಲೇಟ್ ಮಾಡಿರೋದಕ್ಕೆ ಕರ್ನಾಟಕದ ಜನತೆಯ ಕ್ಷಮೆ ಕೇಳಬೇಕು ಅಂತ ನೋಟಿಸ್ನಲ್ಲಿ ಆಗ್ರಹಿಸಲಾಗಿದೆ.
-masthmagaa.com
Contact Us for Advertisement