masthmagaa.com:
ಇಂಟೀರಿಯರ್ ಡಿಸೈನರ್ ಮತ್ತು ಅವರ ತಾಯಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಅಲಿಬಾಗ್ನ ಕ್ವಾರಂಟೈನ್ ಸೆಂಟರ್ನಿಂದ ಮುಂಬೈನ ತಲೋಜಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಕ್ವಾರಂಟೈನ್ ಸೆಂಟರ್ನಲ್ಲಿ ಮೊಬೈಲ್ ಫೋನ್ ಬಳಸಿದ ಆರೋಪ ಹಿನ್ನೆಲೆ ಅವರನ್ನ ಭಾನುವಾರ ಬೆಳಗ್ಗೆ ರಾಯಘಡ ಪೊಲೀಸರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಪೊಲೀಸ್ ವಾಹನದಲ್ಲಿ ಹೋಗುವಾಗ ಮಾತನಾಡಿದ ಅರ್ನಬ್ ಗೋಸ್ವಾಮಿ, ‘ನನ್ನ ಜೀವಕ್ಕೆ ಅಪಾಯವಿದೆ. ವಕೀಲರೊಂದಿಗೆ ಮಾತನಾಡಲು ಬಿಡುತ್ತಿಲ್ಲ. ಪೊಲೀಸರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದಯವಿಟ್ಟು ನನ್ನ ಜೀವಕ್ಕೆ ಅಪಾಯವಿದೆ ಅಂತ ದೇಶದ ಜನರಿಗೆ ಹೇಳಿ’ ಅಂತ ಹೇಳಿದ್ದಾರೆ.
-masthmagaa.com
Contact Us for Advertisement