masthmagaa.com:
ದೆಹಲಿ: ಕೊರೋನಾ ಅನ್ನೋ ಮಹಾಮಾರಿ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಅದರಲ್ಲೂ ವೈದ್ಯಕೀಯ ಸೇವೆಯಲ್ಲಿ ತೊಡಗಿರುವವರು ಪ್ರಾಣವನ್ನ ಪಣಕ್ಕಿಟ್ಟು ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ವೈದ್ಯರು, ನರ್ಸ್ಗಳು ಅಥವಾ ಸ್ಯಾನಿಟೈಸೇಷನ್ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ಇದು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಅನ್ವಯವಾಗಲಿದೆ. ಅಲ್ಲದೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತೊಡಗಿರೋರು ‘ಯೋಧರಿಗಿಂತ ಕಡಿಮೆಯಲ್ಲ’ ಅಂತ ಕೇಜ್ರಿವಾಲ್ ಹೇಳಿದ್ದಾರೆ. ದೇಶದಲ್ಲಿ ಇದುವರೆಗೆ 1600ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 45ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.
-masthmagaa.com
Contact Us for Advertisement