mastshmagaa.com:
ಮುಂಬೈ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಮುಂಬೈ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ ಆರ್ಯನ್ ಖಾನ್ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಎನ್ಸಿಬಿ ಅಧಿಕಾರಿಗಳು ವಾಟ್ಸಾಪ್ ಸಂದೇಶಗಳನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ ಅಂತ ಕೂಡ ಆರೋಪಿಸಿದ್ದಾರೆ. ಅಕ್ಟೋಬರ್ 26ರಂದು ಹೈಕೋರ್ಟ್ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಿದೆ. ಮತ್ತೊಂದ್ಕಡೆ ಇದೇ ಪ್ರಕರಣದಲ್ಲಿ ನಿನ್ನೆ ಎನ್ಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ನಟಿ ಅನನ್ಯಪಾಂಡೆಗೆ ಮತ್ತೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಎನ್ಸಿಬಿ ಅಧಿಕಾರಿಗಳು, ಅನನ್ಯ ಪಾಂಡೆಯನ್ನು ವಾಟ್ಸಾಪ್ ಚಾಟ್ ಜೊತೆಗೆ ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಸಂಬಂಧ ವಿಚಾರಣೆಗೆ ಒಳಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಅದ್ರ ಬೆನ್ನಲ್ಲೇ ಬಾಂದ್ರಾದ ಮೂರು ಸ್ಥಳಗಳಲ್ಲಿ ಎನ್ಸಿಬಿ ದಾಳಿ ನಡೆಸಿದೆ.
-mastshmagaa.com
Contact Us for Advertisement