masthmagaa.com:
ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಸಿನಿಮಾದ ಮೇಲೆ ನಿಷೇಧ ವಿಧಿಸಿರುವ ಪಶ್ಚಿಮ ಬಂಗಾಳ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಿನ್ನಡೆ ಉಂಟುಮಾಡಿದೆ. ಜೊತೆಗೆ ತಮಿಳುನಾಡಿನಲ್ಲಿಯೂ ಚಿತ್ರಮಂದಿರಗಳಿಗೆ ಸೂಕ್ತ ಭದ್ರತೆ ಒದಗಿಸಿ ಸಿನಿಮಾ ಪ್ರದರ್ಶನ ಮಾಡುವಂತೆ ಕೂಡ ಸೂಚಿಸಿದೆ. ಇದೇ ವೇಳೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರನ್ನೊಳಗೊಂಡ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನ ಜುಲೈ ತಿಂಗಳಿಗೆ ಮುಂದೂಡಿದೆ.
-masthmagaa.com
Contact Us for Advertisement