ನೌಕಾಪಡೆ ಮಾಜಿ ಯೋಧನ ಮೇಲೆ ಹಲ್ಲೆ ಮಾಡಿದವರಿಗೆ ಜಾಮೀನು..!

masthmagaa.com:

ಮುಂಬೈ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. 65 ವರ್ಷದ ಮದನ್ ಶರ್ಮಾ ಎಂಬ ನೌಕಾಪಡೆಯ ನಿವೃತ್ತ ಅಧಿಕಾರಿ ಉದ್ಧವ್ ಠಾಕ್ರೆಗೆ ಸಂಬಂಧಿಸಿದ ಒಂದು ಕಾರ್ಟೂನ್​​ನ್ನು ಫಾರ್ವರ್ಡ್ ಮಾಡಿದ್ದರು. ಇದ್ರಿಂದ ರೊಚ್ಚಿಗೆದ್ದ ಶಿವಸೇನೆಯ ಸ್ಥಳೀಯ ನಾಯಕ ಕಮಲೇಶ್ ಕದಮ್ ಮತ್ತು ಐವರು ಶಿವಸೇನೆ ಕಾರ್ಯಕರ್ತರು ಮದನ್ ಶರ್ಮಾ ಅವರ ನಿವಾಸಕ್ಕೆ ತೆರಳಿ ಹಲ್ಲೆ ನಡೆಸಿದ್ದರು. ಈ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ಸಂಬಂಧ ಕೇಸ್ ದಾಖಲಿಸಿದ್ದ ಪೊಲೀಸರು ನಿನ್ನೆ ರಾತ್ರಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ಆದ್ರೆ ಇಂದು ಅದೇ ಪೊಲೀಸರು ಆರೋಪಿಗಳನ್ನು ಜಾಮೀನು ಮೂಲಕ ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಆರೋಪಿಗಳನ್ನು 7 ವರ್ಷ ಅಥವಾ ಅದಕ್ಕಿಂತಲೂ ಕಡಿಮೆ ಶಿಕ್ಷೆಯ ಪ್ರಕರಣದಲ್ಲಿ ಬಂಧಿಸಿದ್ರೆ, ಅಂಥವರಿಗೆ ಜಾಮೀನು ನೀಡುವ ಅಧಿಕಾರವನ್ನು ಸುಪ್ರೀಂಕೋರ್ಟ್​ ಪೊಲೀಸರಿಗೆ ನೀಡಿದೆ. ಅದರ ಆಧಾರದಲ್ಲಿ ನಾವು ಜಾಮೀನು ನೀಡಿದ್ದೇವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply