masthmagaa.com:
ಮುಂಬೈ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. 65 ವರ್ಷದ ಮದನ್ ಶರ್ಮಾ ಎಂಬ ನೌಕಾಪಡೆಯ ನಿವೃತ್ತ ಅಧಿಕಾರಿ ಉದ್ಧವ್ ಠಾಕ್ರೆಗೆ ಸಂಬಂಧಿಸಿದ ಒಂದು ಕಾರ್ಟೂನ್ನ್ನು ಫಾರ್ವರ್ಡ್ ಮಾಡಿದ್ದರು. ಇದ್ರಿಂದ ರೊಚ್ಚಿಗೆದ್ದ ಶಿವಸೇನೆಯ ಸ್ಥಳೀಯ ನಾಯಕ ಕಮಲೇಶ್ ಕದಮ್ ಮತ್ತು ಐವರು ಶಿವಸೇನೆ ಕಾರ್ಯಕರ್ತರು ಮದನ್ ಶರ್ಮಾ ಅವರ ನಿವಾಸಕ್ಕೆ ತೆರಳಿ ಹಲ್ಲೆ ನಡೆಸಿದ್ದರು. ಈ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ಸಂಬಂಧ ಕೇಸ್ ದಾಖಲಿಸಿದ್ದ ಪೊಲೀಸರು ನಿನ್ನೆ ರಾತ್ರಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ಆದ್ರೆ ಇಂದು ಅದೇ ಪೊಲೀಸರು ಆರೋಪಿಗಳನ್ನು ಜಾಮೀನು ಮೂಲಕ ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಆರೋಪಿಗಳನ್ನು 7 ವರ್ಷ ಅಥವಾ ಅದಕ್ಕಿಂತಲೂ ಕಡಿಮೆ ಶಿಕ್ಷೆಯ ಪ್ರಕರಣದಲ್ಲಿ ಬಂಧಿಸಿದ್ರೆ, ಅಂಥವರಿಗೆ ಜಾಮೀನು ನೀಡುವ ಅಧಿಕಾರವನ್ನು ಸುಪ್ರೀಂಕೋರ್ಟ್ ಪೊಲೀಸರಿಗೆ ನೀಡಿದೆ. ಅದರ ಆಧಾರದಲ್ಲಿ ನಾವು ಜಾಮೀನು ನೀಡಿದ್ದೇವೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement