ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ ನಾಳೆ!

masthmagaa.com:

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಾಳೆ ನಡೆಯೊ ಸಾಧ್ಯತೆಯಿದೆ. ಈ ಹಿನ್ನಲೆ ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ವಕೀಲರಾದ ಮುಕುಲ್‌ ರೋಹಟಗಿ ಅವ್ರನ್ನ ದಿಲ್ಲಿಯಲ್ಲಿ ಭೇಟಿಯಾಗಿದ್ದಾರೆ. ರೋಹಟಗಿ ಅವರು ರಾಜ್ಯದ ಪರವಾಗಿ ಸಮರ್ಥವಾದ ವಾದ ಮಾಡ್ತಾರೆ ಅಂತ ಭರವಸೆ ಇದೆ ಅಂತ ಅವ್ರನ್ನ ಭೇಟಿಯಾದ ಬಳಿಕ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ಮುಕುಲ್‌ ರೋಹಟಗಿ ಅವ್ರಿಗೆ ಈಗಾಗಲೇ ಗಡಿ ವಿವಾದಕ್ಕೆ ಸಂಬಂಧಪಟ್ಟ ಎಲ್ಲ ವಿಷಯವನ್ನ ನಮ್ಮ ಅಡ್ವೋಕೇಟ್‌ ಜನರಲ್‌ ವಿವರಿಸಿದ್ದಾರೆ. ಗಡಿ ವಿವಾದದ ಕಾನೂನಾತ್ಮಕ ಹಿನ್ನಲೆ ಬಗ್ಗೆ ನಾನು ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸೋಕೆ ಎಲ್ಲ ರೀತಿಯ ಸಿದ್ದತೆ ನಡೆದಿದೆ ಅಂತ ಹೇಳಿದ್ದಾರೆ. ಇನ್ನು ಇತ್ತ ನಾಳೆ ಸುಪ್ರೀಂಕೋರ್ಟ್‌ನಲ್ಲಿ ಯಾವುದೇ ತೀರ್ಪು ಬಂದರೂ, ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಬಗ್ಗೆ ADGP ಅಲೋಕ್‌ ಕುಮಾರ್‌ ನೇತೃತ್ವದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಲಾಗಿದೆ.

-masthmagaa.com

Contact Us for Advertisement

Leave a Reply