masthmagaa.com:
ರಾಜ್ಯದಲ್ಲಿ ʻಗೃಹ ಜ್ಯೋತಿʼ ಯೋಜನೆ ಯಶಸ್ವಿಯಾಗಿರೋದ್ರಿಂದ ಪಕ್ಕದ ತೆಲಂಗಾಣದಲ್ಲೂ ಈ ಯೋಜನೆ ಅಳವಡಿಸಲು ಪ್ಲ್ಯಾನ್ ಮಾಡಲಾಗ್ತಿದೆ. ಇತ್ತೀಚೆಗೆ ಅಧಿಕಾರಕ್ಕೆ ಬಂದಿರೋ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನ ಮಾಡಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ತೆಲಂಗಾಣ ರಾಜ್ಯ ದಕ್ಷಿಣ ವಿದ್ಯುತ್ ವಿತರಣಾ ಕಂಪನಿ (TSSPDCL) ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿ ಯೋಜನೆ ಬಗ್ಗೆ ಮಾಹಿತಿ ಪಡ್ಕೊಂಡಿದೆ ಅಂತ ವರದಿಯಾಗಿದೆ.
-masthmagaa.com
Contact Us for Advertisement