ಕುಮಾರಸ್ವಾಮಿಗೆ BJP ಕಡೆ ಇಂದ ಬಂಪರ್‌ ಆಫರ್! ಏನದು?

masthmagaa.com:

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ನ್ನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಗ್ಗುಬಡಿಯೋಕೆ ಬಿಜೆಪಿ ಹಾಗೂ ಜೆಡಿಎಸ್‌ ಈಗಾಗಲೇ ತಯಾರಿ ನಡೆಸಿವೆ. ಬಿಜೆಪಿ-ಜೆಡಿಎಸ್‌ ಮೈತ್ರಿಯನ್ನ ಮತ್ತಷ್ಟು ಬಲಿಷ್ಠಗೊಳಿಸಲು ಪ್ಲಾನ್‌ ಮಾಡಲಾಗ್ತಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವ್ರಿಗೆ ಬಂಪರ್‌ ಆಫರ್‌ ನೀಡಲು ಬಿಜೆಪಿ ಮುಂದಾಗಿದೆ. ಮೂಲಗಳ ಪ್ರಕಾರ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರನ್ನ ಸ್ಪರ್ಧಿಸಿ ಗೆಲ್ಲುವಂತೆ ಮಾಡಿ, ಅವರನ್ನು ಕೇಂದ್ರ ಸಚಿವರನ್ನಾಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply