masthmagaa.com:
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ತೀರ್ಪು ನೀಡಿದ್ದು, ಮೂರು ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಿದೆ. ಗಣೇಶೋತ್ಸವಕ್ಕೆ ಅನುಮತಿ ನೀಡಿದ್ದ ಮಹಾನಗರ ಪಾಲಿಕೆಯ ನಿರ್ಧಾರವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯವರು ಧಾರವಾಡ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದ್ರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯನ್ನ ತಿರಸ್ಕರಿಸಿ, ತೀರ್ಪು ನೀಡಿದೆ. ಈ ಮೂಲಕ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ನಡೆಯಲಿದೆ. ಧಾರವಾಡ ಹೈಕೋಟ್೯ ತೀರ್ಪನ್ನ ಬಿಜೆಪಿ ಶಾಸಕರು, ಮುಖಂಡರು ಸ್ವಾಗತಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
-masthmagaa.com
Contact Us for Advertisement