masthmagaa.com:
ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕ ಬೆನ್ನಲ್ಲೇ ನಾಪತ್ತೆಯಾಗಿರೋ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವ್ರಿಗೆ ನೋಟಿಸ್ ನೀಡಲಾಗಿದೆ. ಸೋಮವಾರ ಅಂದ್ರೆ ನಾಳೆ ಬೆಳಿಗ್ಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ವಿರೂಪಾಕ್ಷಪ್ಪ ಆದಾಯ ಮೀರಿ ಅಧಿಕ ಆಸ್ತಿ ಮಾಡಿಕೊಂಡಿದಾರಾ ಅನ್ನೋದನ್ನ ಪರಿಶೀಲನೆ ಮಾಡೋಕೆ ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದಾರೆ. ಯಾಕಂದ್ರೆ ಚುನಾವಣೆ ವೇಳೆ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅಫಿಡವಿಟ್ಗೂ ಈಗಿನ ಅವರ ಆಸ್ತಿಗೂ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗಿದೆ. ಹೀಗಾಗಿ ತನಿಖೆಗೆ ಮುಂದಾಗಿದ್ದಾರೆ. ಇತ್ತ ಸರ್ಕಾರದ ವಿರುದ್ದ ಕೇಳಿ ಬರ್ತಿರೋ ಭ್ರಷ್ಟಾಚಾರವನ್ನ ಖಂಡಿಸಿ ಮಾರ್ಚ್ 9ರಂದು ಕರ್ನಾಟಕ ಬಂದ್ಗೆ ಕರೆಕೊಡ್ತಿದ್ದೀವಿ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗ್ಗೆ 9ರಿಂದ 11 ಗಂಟೆವರೆಗೆ ಎಲ್ಲ ವ್ಯಾಪಾರಿಗಳು ಬಂದ್ಗೆ ಬೆಂಬಲ ನೀಡಬೇಕು ಅಂತ ಡಿಕೆಶಿ ಮನವಿ ಮಾಡಿದ್ದಾರೆ.
-masthmagaa.com
Contact Us for Advertisement