masthmagaa.com:
ಮುಂದಿನ ವಿಧಾನಸಭೆ ಚುನಾವಣೆಗೆ ಈ ಮುಖ್ಯಮಂತ್ರಿಯನ್ನ, ಅಂದ್ರೆ ಸಿಎಂ ಯಡಿಯೂರಪ್ಪ ಅವರನ್ನ ತಗೊಂಡು ಹೋದ್ರೆ ಬಿಜೆಪಿ ಕಥೆ ಅಷ್ಟೇ. ರಾಜ್ಯದಲ್ಲಿ ಬಿಜೆಪಿಯನ್ನ ಜೀವಂತವಾಗಿ ಉಳಿಸಬೇಕು ಅಂದ್ರೆ ಸಿಎಂ ಬದಲಾವಣೆ ಮಾಡೋದು ಅನಿವಾರ್ಯ ಅಂತ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಯತ್ನಾಳ್ಗೆ ತಿರುಗೇಟು ಕೊಟ್ಟಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ, ‘ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡೋಕೆ ನೀನ್ಯಾರೋ’ ಅಂತ ಏಕವಚನದಲ್ಲಿ ಹರಿಹಾಯ್ದಿದ್ದಾರೆ. ಜೊತೆಗೆ ಬಿಜೆಪಿಗೂ ಯತ್ನಾಳ್ಗೂ ಯಾವುದೇ ಸಂಬಂಧವಿಲ್ಲ ಅನ್ನೋ ರೀತಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಹೇಳಿಕೆ ಕೊಟಿದ್ದಾರೆ. ಹೀಗಾಗಿ ಯತ್ನಾಳ್ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲು ವರಿಷ್ಠರಿಗೆ ಆಗ್ರಹಿಸುತ್ತೇವೆ ಅಂತಾನೂ ರೇಣುಕಾಚಾರ್ಯ ಹೇಳಿದ್ದಾರೆ.
-masthmagaa.com
Contact Us for Advertisement