ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ: ಆರ್‌ ಅಶೋಕ್

masthmagaa.com:

ಡಿಕೆ ಸುರೇಶ್‌ ಹೇಳಿಕೆ ಬೆನ್ನಲ್ಲೆ ಮಾಜಿ ಸಚಿವ ಆರ್‌ ಅಶೋಕ್‌ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಒಳ ಜಗಳ ಹೊರ ಬರುತ್ತಿದೆ. ಗ್ಯಾರಂಟಿಯಾಗಿ ಹೇಳುತ್ತೇನೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ. ಕರ್ನಾಟಕದಲ್ಲಿ ಅವರಿಬ್ಬರಿಗಿಂತ ಸಿದ್ದರಾಮಯ್ಯ ಪವರ್ ಫುಲ್​. ಅಧಿಕಾರ ಹಂಚಿಕೆ ಒಂದು ನಾಟಕ ಅಷ್ಟೇ. ಅದಕ್ಕಾಗಿ ಡಿ.ಕೆ.ಸುರೇಶ್ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡಿದ್ದಾರೆ ಅಂತ ಹೇಳಿದ್ದಾರೆ. ಅಷ್ಟೇ ಅಲ್ದೇ ಡಿ.ಕೆ.ಶಿವಕುಮಾರ್​ ಸಿಎಂ ಆಗಲ್ಲ ಅಂತ ಡಿ.ಕೆ.ಸುರೇಶ್​ಗೆ ಗೊತ್ತಾಗಿದೆ. ಕಾಂಗ್ರೆಸ್​ ಒಂದು ರೀತಿ ಒಡೆದ ಮನೆ ಆಗಿದೆ. ಶ್ಯಾಡೋ ಮುಖ್ಯಮಂತ್ರಿಯಂತೆ ನಟಿಸಲು ಡಿಕೆ ಶಿವಕುಮಾರ್ ಹೋಗುತ್ತಿದ್ದಾರೆ. ಇನ್ನು 6 ತಿಂಗಳಲ್ಲಿ ಸಿದ್ದರಾಮಯ್ಯ, ಡಿಕೆ ಜಗಳ ಬಹಿರಂಗವಾಗುತ್ತದೆ ಅಂತ ಅಶೋಕ್ ಭವಿಷ್ಯ ನುಡಿದಿದ್ದಾರೆ.

-masthmagaa.com

Contact Us for Advertisement

Leave a Reply