ಕಾಂಗ್ರೆಸ್‌ನ ʻಪೇಸಿಎಂʼ ಟಾಂಗ್‌ ಕೊಟ್ಟ ಬಿಜೆಪಿ ʻಪೇ ಸಿಎಸ್‌ʼ ಅಭಿಯಾನ!

masthmagaa.com:

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್​.ಚಲುವರಾಯಸ್ವಾಮಿ ಅವರ ಪರ ಹಾಗೂ ವಿರುದ್ಧವಾಗಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಮಂಡ್ಯ ​ಬಿಜೆಪಿ ಕಾರ್ಯಕರ್ತರು ಅಲ್ಲಿನ ಸಂಜಯ್​​ ವೃತ್ತದಲ್ಲಿ ‘ಪೇಸಿಎಸ್’ ಅನ್ನೊ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿದ್ದಾರೆ. ಜೊತೆಗೆ ‘ಸ್ಕ್ಯಾನ್ ಮಾಡಿ ನೋಡಿ, ಚೆಲುವ ಚನ್ನಿಗರಾಯನ ಭ್ರಷ್ಟಾಚಾರ ಬರಬಹುದು’ ಅನ್ನುವ ಟ್ಯಾಗ್‌ಲೈನ್‌ ಹಾಕಿ ವ್ಯಂಗ್ಯ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಮಂಡ್ಯದ ನಾಗಮಂಗಲದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಕಾಂಗ್ರೆಸ್‌ ಕಚೇರಿಯಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ ಸಚಿವ ಎನ್​.ಚಲುವರಾಯಸ್ವಾಮಿ ಏಳಿಗೆ ಸಹಿಸದೆ ಷಡ್ಯಂತ್ರ ಮಾಡ್ತಿದ್ದಾರೆ ಅಂತ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಸುರೇಶ್‌ಗೌಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಂದ್ಹಾಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ ಪೇಸಿಎಂ ಅಭಿಯಾನ ಮಾಡಿತ್ತು.

-masthmagaa.com

Contact Us for Advertisement

Leave a Reply