masthmagaa.com:
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಪರ ಹಾಗೂ ವಿರುದ್ಧವಾಗಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಮಂಡ್ಯ ಬಿಜೆಪಿ ಕಾರ್ಯಕರ್ತರು ಅಲ್ಲಿನ ಸಂಜಯ್ ವೃತ್ತದಲ್ಲಿ ‘ಪೇಸಿಎಸ್’ ಅನ್ನೊ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿದ್ದಾರೆ. ಜೊತೆಗೆ ‘ಸ್ಕ್ಯಾನ್ ಮಾಡಿ ನೋಡಿ, ಚೆಲುವ ಚನ್ನಿಗರಾಯನ ಭ್ರಷ್ಟಾಚಾರ ಬರಬಹುದು’ ಅನ್ನುವ ಟ್ಯಾಗ್ಲೈನ್ ಹಾಕಿ ವ್ಯಂಗ್ಯ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಮಂಡ್ಯದ ನಾಗಮಂಗಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ ಸಚಿವ ಎನ್.ಚಲುವರಾಯಸ್ವಾಮಿ ಏಳಿಗೆ ಸಹಿಸದೆ ಷಡ್ಯಂತ್ರ ಮಾಡ್ತಿದ್ದಾರೆ ಅಂತ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಸುರೇಶ್ಗೌಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಂದ್ಹಾಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿತ್ತು.
-masthmagaa.com
Contact Us for Advertisement