ಮುಸ್ಲಿಮರ ಬಗ್ಗೆ ವಿವಾದದ ಮಾತು: ಜಮ್ಮು ಕಾಶ್ಮೀರದ ಬಿಜೆಪಿ ನಾಯಕನ ಮೇಲೆ ಕೇಸ್

masthmagaa.com:

ಜಮ್ಮು ಕಾಶ್ಮೀರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ನಾಲಗೆ ಹರಿಬಿಟ್ಟಿದ್ದ ಬಿಜೆಪಿ ನಾಯಕನ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. ಟಿ20 ವಿಶ್ವಕಪ್​​ನ ಭಾರತದ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತ ಬಳಿಕ ಮುಸ್ಲಿಂ ಸಮುದಾಯದ ವಿರುದ್ಧ ಬಿಜೆಪಿ ನಾಯಕ ವಿಕ್ರಂ ರಾಂಧವ ಮಾತನಾಡಿದ್ರು. ಅದ್ರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿ, ಟೀಕೆಗೆ ಕಾರಣವಾಗಿತ್ತು. ಇನ್ನು ಬಿಜೆಪಿ ಕೂಡ ವಿಕ್ರಮ ರಾಂಧವಗೆ ಶೋಕಾಸ್ ನೋಟಿಸ್ ಕೊಟ್ಟಿದ್ದು, 48 ಗಂಟೆಗಳ ಒಳಗಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಪಕ್ಷಕ್ಕೆ ಉತ್ತರಿಸಿ ಅಂತ ಹೇಳಿದೆ.

-masthmagaa.com

Contact Us for Advertisement

Leave a Reply